ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: ಈ ವರ್ಷ ಯಾರಿಗೆ ಗೌರವ?

ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಯಾರೆಲ್ಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಚಲನಚಿತ್ರ, ಕಿರುತೆರೆ ವಿಭಾಗದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್, ನಟಿ ವಿಜಯಲಕ್ಷ್ಮೀ ಸಿಂಗ್ ಅವರಿಗೆ ರಾಜ್ಯೋತ್ಸವ ಪ್ರಶಸಿ ಘೋಷಣೆಯಾಗಿದೆ.

ನಿವೃತ್ತ ಐಎ ಎಸ್ ಅಧಿಕಾರಿ ಸಿದ್ದಯ್ಯ, ಸಾಹಿತ್ಯ ಕ್ಷೇತ್ರದಲ್ಲಿ ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ, ಪ್ರೊ.ಆರ್. ಸುನಂದಮ್ಮ, ಡಾ.ಹೆಚ್.ಎಲ್.ಪುಷ್ಪ ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪೌರ ಕಾರ್ಮಿಕರಾದ ಫಕೀರವ್ವ ಸೇರಿದಂತೆ 70 ಜನ ಸಾಧಕರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ

Star Of Kudla

Learn More →

Leave a Reply

Your email address will not be published. Required fields are marked *