ಅಪಘಾತದಲ್ಲಿ ಗಾಯಗೊಂಡ ಹಸುಗೂಸಿಗೆ ಆರೈಕೆ ನೀಡಿದ ಚಂದ್ರಪ್ರಭಾ ಗೌಡ – ಮಾನವೀಯ ಸೇವೆಗೆ ಭಾರೀ ಮೆಚ್ಚುಗೆ

ಪುತ್ತೂರು: ಪರ್ಪುಂಜ ಅಬ್ರಾಡ್ ಹಾಲ್ ಬಳಿ ನ.1ರಂದು ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

ಘಟನೆ ಬಗ್ಗೆ ಮಾಹಿತಿ ಅರಿತ ಕೂಡಲೇ ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಅವರು ನೇರವಾಗಿ ಮೆಡ್ ಲ್ಯಾಂಡ್ ಆಸ್ಪತ್ರೆಗೆ ಆಗಮಿಸಿ ಅಲ್ಲಿ ದಾಖಲಾಗಿದ್ದ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವ ವಿಷಯದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯಪ್ರವೃತ್ತರಾಗಿದ್ದರು. ಅಪಘಾತಕ್ಕೀಡಾದ ರಿಕ್ಷಾದಲ್ಲಿ 4 ತಿಂಗಳ ಮಗುವೊಂದು ಗಾಯಗೊಂಡಿದ್ದು ಆ ಮಗುವಿನ ತಾಯಿ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಕಾರಣ ಮಗುವಿನ ಆರೈಕೆಯಲ್ಲಿ ತೊಡಗಿದ ಚಂದ್ರಪ್ರಭಾ ಗೌಡ ಅವರು ಮಗುವನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಲ್ಲದೇ ಬಳಿಕ ಇನ್ನೊಂದು ಖಾಸಗಿ ಆಸ್ಪತ್ರೆಗೆ ಹೋಗಿ ಆ ಬಳಿಕ ಮಗುವಿಗೆ ಸಿಟಿ ಸ್ಕ್ಯಾನ್ ಅಗತ್ಯ ಇದ್ದ ಹಿನ್ನೆಲೆಯಲ್ಲಿ ಮಗುವನ್ನು ದರ್ಶನ್ ಕಲಾ ಮಂದಿರ ಬಳಿ ಇರುವ ಸ್ಕ್ಯಾನಿಂಗ್ ಸೆಂಟರ್ ಗೆ ಕೊಂಡು ಹೋಗಿ ಸಿಟಿ ಸ್ಕ್ಯಾನ್ ಮಾಡಿಸಿದ್ದಾರೆ. ಮಾತ್ರವಲ್ಲದೇ ಸಿಟಿ ಸ್ಕ್ಯಾನ್ ಮಾಡಿದ ಫೀಸ್ ನ್ನು ಕೂಡಾ ಅವರೇ ಭರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಎಲ್ಲಾ ಕಾರ್ಯಗಳು ಮುಗಿದಾಗ 10 ಗಂಟೆ ರಾತ್ರಿಯಾಗಿತ್ತು. ಬಳಿಕ ಮಗುವನ್ನು ಮಗುವಿನ ಸಂಬಂಧಿಕರಿಗೆ ಕೊಟ್ಟು ಬಂದಿದ್ದಾರೆ. ಸಂಜೆಯಿಂದ 10 ಗಂಟೆ ರಾತ್ರಿವರೆಗೂ ಹಸುಗೂಸುವೊಂದರ ಆರೈಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನವೀಯತೆ ಮೆರೆದ ಚಂದ್ರಪ್ರಭಾ ಗೌಡ ಅವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು ಅವರ ಮಾನವೀಯ ಸೇವೆಯ ಫೋಟೋ, ವಿಡಿಯೋ ವೈರಲ್ ಆಗಿದೆ.

ಜಾತಿ ಧರ್ಮಕ್ಕಿಂತ ಮಾನವೀಯತೆ ಮುಖ್ಯ ಎನ್ನುವ ಸಂದೇಶ ನೀಡಿದ ಚಂದ್ರಪ್ರಭಾ ಗೌಡ ಅವರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹಲವರು ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!