ಯುಐಡಿಎಐ ಹೊಸ ಆಧಾರ್ ಅಪ್ಲಿಕೇಶನ್ ಬಿಡುಗಡೆ – ಡಿಜಿಟಲ್ ಆಧಾರ್ ಹಂಚಿಕೆಗೆ ಸುಲಭ ಮಾರ್ಗ

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಹೊಸ ಆಧಾರ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಬಳಕೆದಾರರು ತಮ್ಮ ಆಧಾರ್ ವಿವರಗಳನ್ನು ತಮ್ಮ ಫೋನ್‌ಗಳಲ್ಲಿ ಸೇವ್​ ಮತ್ತು ಇತರರೊಂದಿಗೆ ಸುಲಭವಾಗಿ ಹಂಚಿಕೊಳ್ಳಲು ಸಹಾಯ ಮಾಡಲು ಈ ಅಪ್ಲಿಕೇಶನ್ ಅನ್ನು ವಿನ್ಯಾಸಗೊಳಿಸಲಾಗಿದೆ. ಆಂಡ್ರಾಯ್ಡ್ ಬಳಕೆದಾರರು ಇದನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಮತ್ತು ಐಫೋನ್ ಬಳಕೆದಾರರು ಇದನ್ನು ಆಪಲ್ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬಹುದು ಎಂದು ಯುಐಡಿಎಐ ಎಕ್ಸ್​ನಲ್ಲಿ ಹೇಳಿದೆ. ಈ ಅಪ್ಲಿಕೇಶನ್ ಮೂಲಕ ಇದು ಕಾಗದರಹಿತ ಅನುಭವವನ್ನು ಒದಗಿಸುತ್ತದೆ.

mAadhaar ಎಂಬ ಅಪ್ಲಿಕೇಶನ್ ಈಗಾಗಲೇ UIDAI ನಿಂದ ಲಭ್ಯವಿದೆ. ಈ ಹೊಸ ಅಪ್ಲಿಕೇಶನ್ ಇದರ ಜೊತೆಗೆ ಇದೆ. mAadhaar ನಂತೆ ಇದು ಡಿಜಿಟಲ್ ಕಾರ್ಡ್ ಡೌನ್‌ಲೋಡ್, PVC ಕಾರ್ಡ್‌ಗಾಗಿ ಆರ್ಡರ್ ಮಾಡುವುದು, ಇ-ಮೇಲ್, ಮೊಬೈಲ್ ಸಂಖ್ಯೆ ಪರಿಶೀಲನೆ ಮತ್ತು ವರ್ಚುವಲ್ ಐಡಿ ಉತ್ಪಾದನೆಯಂತಹ ಯಾವುದೇ ವೈಶಿಷ್ಟ್ಯಗಳನ್ನು ಹೊಂದಿಲ್ಲ. ಈ ಅಪ್ಲಿಕೇಶನ್ ನಿಮ್ಮ ಆಧಾರ್ ವಿವರಗಳನ್ನು ಸಂಗ್ರಹಿಸಲು ಮತ್ತು ಇತರರೊಂದಿಗೆ ಹಂಚಿಕೊಳ್ಳಲು ಮಾತ್ರ ವಿನ್ಯಾಸಗೊಳಿಸಲಾಗಿದೆ.

ಹೊಸ ಅಪ್ಲಿಕೇಶನ್‌ನಲ್ಲಿ ಏನಿದೆ? ಹೊಸ ಆಧಾರ್ ಅಪ್ಲಿಕೇಶನ್ ನಿಮ್ಮ ಆಧಾರ್ ಕಾರ್ಡ್ ಅನ್ನು ಪ್ರತಿ ಬಾರಿ ನಿಮ್ಮೊಂದಿಗೆ ಕೊಂಡೊಯ್ಯದೆ ಡಿಜಿಟಲ್ ಆಗಿ ಲಭ್ಯವಾಗುವಂತೆ ಮಾಡಲು ಉಪಯುಕ್ತವಾಗಿದೆ. ನಿಮ್ಮ ಕುಟುಂಬ ಸದಸ್ಯರ ಎಲ್ಲಾ ಆಧಾರ್ ವಿವರಗಳನ್ನು ನೀವು ಒಂದೇ ಸಾಧನದಲ್ಲಿ ಸಂಗ್ರಹಿಸಬಹುದು. ಫೇಸ್​ ಅಥೆಂಟಿಕೇಷನ್​​ ವೈಶಿಷ್ಟ್ಯವೂ ಇದೆ. ಈ ಅಪ್ಲಿಕೇಶನ್ ಮೂಲಕ ನಿಮ್ಮ ಕಾರ್ಡ್ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳುವುದು ಸುಲಭ.

ಆಧಾರ್‌ನಲ್ಲಿ ನೀವು ಹಂಚಿಕೊಳ್ಳಲು ಬಯಸುವ ವಿವರಗಳನ್ನು ಮಾತ್ರ ಆಯ್ಕೆ ಮಾಡುವ ಸೌಲಭ್ಯವಿದೆ. ಆಧಾರ್ ಬಯೋಮೆಟ್ರಿಕ್ ವಿವರಗಳನ್ನು ಲಾಕ್ ಅಥವಾ ಅನ್‌ಲಾಕ್ ಮಾಡುವ ಸೌಲಭ್ಯವೂ ಇದೆ. ಈ ಅಪ್ಲಿಕೇಶನ್ ಮೂಲಕ ನಿಮ್ಮ ಆಧಾರ್ ವಿವರಗಳನ್ನು ಕೊನೆಯದಾಗಿ ಎಲ್ಲಿ ಬಳಸಲಾಗಿದೆ ಎಂಬುದನ್ನು ನೀವು ಕಂಡುಹಿಡಿಯಬಹುದು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?