
ದಾವಣಗೆರೆ ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರನ್ನೇ ₹25.93 ಲಕ್ಷಕ್ಕೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.
ಮ್ಯಾಟ್ರಿಮೋನಿ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೋರ್ವ, ಮಹಿಳೆಯ ಸಹೋದರನಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಂಚಕನ ಮಾತು ನಂಬಿದ ಮಹಿಳೆ, ಸೆಪ್ಟೆಂಬರ್ 14ರಿಂದ ಅಕ್ಟೋಬರ್ 30ರವರೆಗೆ ನೂರಕ್ಕೂ ಹೆಚ್ಚು ಬಾರಿ ಹಣ ವರ್ಗಾವಣೆ ಮಾಡಿದ್ದು, ಒಟ್ಟು ₹25.93 ಲಕ್ಷ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಧು ಎಂಬಾತನೇ ಈ ವಂಚನೆ ನಡೆಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ


