ನ.16ರಂದು ಪುತ್ತೂರಿನಲ್ಲಿ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು ಶಾಖೆ ಉದ್ಘಾಟನೆ

ಪುತ್ತೂರು: ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು(ಪರಿಶಿಷ್ಟ ಪಂಗಡ) ಇದರ ಉದ್ಘಾಟನೆ ಮ್ತು ಅಭಿನಂದನಾ ಸಮಾರಂಭವು ನ.16ರಂದು ಪುತ್ತೂರು ಕೊಂಬೆಟ್ಟಿನಲ್ಲಿರುವ ಮರಾಟಿ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾಗಿರುವ ನಿವೃತ್ತ ಅಪರ ಪ್ರಧಾನ ಮುಖ್ಯ ಅರಣ್ಯ ಅಧಿಕಾರಿ ಡಾ. ಕೆ.ಸುಂದರ ನಾಯಕ್ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

2002 -03ರಲ್ಲಿ ಆರಂಭಗೊಂಡಿದ್ದ ಕರ್ನಾಟಕ ಮರಾಠಿ ಫೆಡರೇಷನ್ ಸಂಸ್ಥೆಯ ಆಧೀನದಲ್ಲಿ ಹಲವಾರು ಸಂಘ ಸಂಸ್ಥೆಗಳಿದ್ದು ಅವೆಲ್ಲವು ಶಿಸ್ತು ಮತ್ತು ಸಂಘದ ಚಟುವಟಿಕೆಯ ಹಿನ್ನೆಲೆಯಲ್ಲಿ ಎಲ್ಲಾ 32 ಸಂಘಗಳನ್ನು ದ.ಕ ಜಿಲ್ಲಾ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಒಕ್ಕೂಟದ ಸದಸ್ಯತ್ವದ ಅಡಿಯಲ್ಲಿ ಸೇರಿಸಲಾಗಿದೆ ಎಂದ ಅವರು ಸಂಘದ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಮಾಡಲಿದ್ದಾರೆ. ಇದೇ ಸಂದರ್ಭ ಭಾರತ ಸರಕಾರದ ಕೇಂದ್ರಾಡಳಿತ ಪ್ರದೇಶದ ಮುಖ್ಯಕಾರ್ಯರ್ಶಿ ಹಾಗು ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಇದರ ಗೌರವಾಧ್ಯಕ್ಷ ಹೆಚ್.ರಾಜೇಶ್ ಪ್ರಸಾದ್ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಗುವುದು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಅಭಿನಂದನಿಯ ಭಾಷಣ ಮಾಡಲಿದ್ದಾರೆ. ಸೀನಿಯರ್ ಡೆಪ್ಯೂಟಿ ಅಕೌಂಟಿಂಟ್ ಜನರಲ್, ಇಂಡಿಯನ್ ಅಡಿಟ್ ಆ್ಯಂಡ್ ಅಕೌಂಟ್ಸ್ ಸರ್ವೀಸಸ್ ಪ್ರಿನ್ಸಿಪಾಲ್ ಅಕೌಂಟೆಂಟ್ ಜನರಲ್ ಕಚೇರಿ ಬೆಂಗಳೂರಿನ ಯಶೋದ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಮರಾಟಿ / ಕೊಡಗಿನ ಮರಾಠ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸಮಾಜದ ಎಲ್ಲಾ ಬಂಧುಗು ಸೇರಿ ಸುಮಾರು 2ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸಭಾ ಕಾರ್ಯಕ್ರಮದ ಆರಂಭದಲ್ಲಿ ರಾಜ್ಯಪ್ರಶಸ್ತಿ ಪುರಸ್ಕøತ ಪೂರ್ಣಿಮಾ ಮತ್ತು ಕೃಷ್ಣ ರಾಜ್ ಅವರಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ನ್ಯಾಯವಾದಿ ಎನ್.ಎಸ್ ಮಂಜುನಾಥ್ ನಾಯ್ಕ, ಪ್ರಧಾನ ಕಾರ್ಯದರ್ಶಿ ವಾಸು ನಾಯ್ಕ, ಕೋಶಾಧಿಕಾರಿ ಸುಂದರ ನಾಯ್ಕ, ಪುತ್ತೂರು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕರುಣಾಕರ ಟಿ.ಎನ್, ಉಪಾಧ್ಯಕ್ಷ ಸೀತಾರಾಮ ನಾಯ್ಕ ಮತ್ತು ಪರಮೇಶ್ವರ ನಾಯ್ಕ ಉಪಸ್ಥಿತರಿದ್ದರು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?