
ರಾಜ್ಯದಲ್ಲಿ 11 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಬೆಂಗಳೂರು ಆರ್ ಟಿ ಓ ವ್ಯವಸ್ಥಾಪಕ ನಿರ್ದೇಶಕ ಕುಮಾರಸ್ವಾಮಿ, ಮಂಡ್ಯ ನಗರಪಾಲಿಕೆ ಚೀಫ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಸ್ವಾಮಿ, ಬೀದರ್ ನ ಇಂಜಿನಿಯರ್ ಪ್ರೇಮ್ ಸಿಂಗ್, ಕೃಷ್ಣ ಮೇಲ್ದಂಡೆ ಯೋಜನೆಯ ಇಂಜಿನಿಯರ್, ಮೈಸೂರು ರೆವೆನ್ಯೂ ಇನ್ಸೆಕ್ಟರ್ ರಾಮಸ್ವಾಮಿ, ಹೂಟಗಳ್ಳಿ ನಗರ ಪಾಲಿಕೆಯ ಇನ್ಸೆಕ್ಟರ್ ಸೇರಿದಂತೆ ಹಲವು ಅಧಿಕಾರಿಗಳ ಆಸ್ತಿ ಮೇಲೆ ನಿಗಾ ಇಟ್ಟಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತಲಾಷ್ ಮಾಡುತ್ತಿದ್ದಾರೆ.


