MDMA ಕಳ್ಳಸಾಗಟದಲ್ಲಿ ಐವರು ಆರೋಪಿಗಳಿಗೆ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ವಿಧಿಸಿದ ಪ್ರಕರಣ : ಸರಕಾರಿ ಅಭಿಯೋಜಕರಿಗೆ ಪೋಲಿಸ್ ಇಲಾಖೆಯಿಂದ ಸನ್ಮಾನ.

ಮಂಗಳೂರು ; ದಿ.14-06-2022 ರಂದು ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ದಿನಾಂಕ 6.12.2025 ರಂದು ಒರ್ವ ಸುಡಾನ್ ದೇಶದ ಪ್ರಜೆ ಸಹಿತ 5 ಆರೋಪಿಗಳಿಗೆ 12 ರಿಂದ 14 ವರ್ಷದ ತನಕ ಕಠಿಣ ಸಜೆ ಮತ್ತು ದಂಡದ ಶಿಕ್ಷೆ ವಿಧಿಸಿ ಮಾನ್ಯ ನ್ಯಾಯಾಲಯವು ತೀರ್ಪು ನೀಡಿದೆ.

ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕರಾದ ಶ್ರೀಮತಿ ಜುಡಿತ್ ಓಲ್ಗ ಮಾರ್ಗರೇಟ್ ಕ್ರಾಸ್ತಾ ಇವರನ್ನು ಶ್ರೀ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್, ಪೊಲೀಸ್ ಆಯುಕ್ತರು, ಮಂಗಳೂರು ನಗರ ಇವರು ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಈ ದಿನ ಪೊಲೀಸ್ ಇಲಾಖೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭ ಶ್ರೀ ಮಿಥುನ್ ಐಪಿಎಸ್, ಡಿಸಿಪಿ, ಕಾನೂನು ಮತ್ತು ಸುವ್ಯವಸ್ಥೆ, ಶ್ರೀ ರವೀಶ್ ನಾಯಕ್, ಎಸಿಪಿ ಸೆನ್ ಪೊಲೀಸ್ ಠಾಣೆ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?