ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಮಂಗಳವಾರ(ಆ.18) ಬೆಳಗ್ಗೆ ಪತ್ತೆಯಾಗಿದೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ(70) ಎಂದು ಪೊಲೀಸ್‌ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

Star Of Kudla

Learn More →

Leave a Reply

Your email address will not be published. Required fields are marked *