ಮಂಗಳೂರು: ಚುನಾವಣಾ ಆಯೋಗದ ಅಧಿಕಾರಿಗಳ ಬೇಜವಾಬ್ದಾರಿತನ- ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ದಾಖಲಿಸಿದ ಅಧಿಕಾರಿಗಳು

ಮಂಗಳೂರು: ಚುನಾವಣಾ ಆಯೋಗದ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಜಾಗತಿಕ ಮಾಹಿತಿ ಸಂಗ್ರಹಣೆಯ (SIR) ಪ್ರಕ್ರಿಯೆಯಲ್ಲಿನ ಗಂಭೀರ ಲೋಪವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೀವಂತವಾಗಿರುವ 61 ವರ್ಷದ ಹಿರಿಯ ನಾಗರಿಕರೊಬ್ಬರನ್ನು ಮತದಾರರ ಪಟ್ಟಿಯಲ್ಲಿ “ಮೃತಪಟ್ಟಿದ್ದಾರೆ” ಎಂದು ನಮೂದಿಸಿ, ಅವರ ಹೆಸರನ್ನೇ ಪಟ್ಟಿಯಿಂದ ಕೈಬಿಡಲಾದ ಆಘಾತಕಾರಿ ಘಟನೆ ವರದಿಯಾಗಿದೆ.

ಮಂಗಳೂರಿನ ನಿವಾಸಿ ಡೊನಾಲ್ಡ್ ಜೋಸೆಫ್ ರೇಗು (61) ಈ ಎಡವಟ್ಟಿಗೆ ತುತ್ತಾದ ದುರದೃಷ್ಟಕರ ವ್ಯಕ್ತಿ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಆಗಸ್ಟ್ 24 ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದನ್ನು ಕಂಡು ಅವರು ದಿಗ್ಭ್ರಮೆಗೊಂಡಿದ್ದರು. ಬಳಿಕ ಈ ಕುರಿತು ಅಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲಿಸಿದಾಗ, ಚುನಾವಣಾ ಆಯೋಗದ ದಾಖಲೆಗಳಲ್ಲಿ ಅವರನ್ನು ‘ಮೃತ’ ವಿಭಾಗಕ್ಕೆ ಸೇರಿಸಿರುವುದು ಪತ್ತೆಯಾಗಿದೆ.

ತಾವು ಜೀವಂತವಾಗಿದ್ದರೂ ದಾಖಲೆಗಳಲ್ಲಿ ಮೃತಪಟ್ಟಿದ್ದಾರೆ ಎಂದು ನಮೂದಿಸಿರುವುದಕ್ಕೆ ಡೊನಾಲ್ಡ್ ಜೋಸೆಫ್ ರೇಗು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪಟ್ಟಿಯ ಪರಿಶೀಲನೆ (Verification) ಸರಿಯಾಗಿ ನಡೆಯದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದೇ ಈ ಲೋಪಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಕೂಡಲೇ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸಿ, ದಾಖಲೆಗಳನ್ನು ಸರಿಪಡಿಸುವಂತೆ ಸಂತ್ರಸ್ತರು ಒತ್ತಾಯಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *