ಮಂಗಳೂರು: ಜೈಲು ಜಾಮರ್ ಸಮಸ್ಯೆ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಮುಂದಾದ ವಕೀಲರು; ಕೋರ್ಟ್ ಆವರಣದಲ್ಲೇ ಪೊಲೀಸ್ ವಶಕ್ಕೆ

ಮಂಗಳೂರು: ಜೈಲು ಜಾಮರ್ ಸಮಸ್ಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯ ಸ್ಥಳಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ವಕೀಲರನ್ನು ಪೊಲೀಸರು ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿಯೇ ತಡೆದು ವಶಕ್ಕೆ ಪಡೆದಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಲು ವಕೀಲರು ನಿರ್ಧರಿಸಿದ್ದರು. ಆದರೆ ಜಾಥಾಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಿಂದ ಹೊರಡುವ ಮುನ್ನವೇ ಪೊಲೀಸರು ವಕೀಲರನ್ನು ತಡೆದಿದ್ದು, ಈ ವೇಳೆ ಪೊಲೀಸರು ಮತ್ತು ವಕೀಲರ ನಡುವೆ ತಳ್ಳಾಟ, ಜಟಾಪಟಿ ನಡೆದಿದೆ.

ಜೈಲು ಸುತ್ತಮುತ್ತ ಮೊಬೈಲ್ ಜಾಮರ್ ಸಮಸ್ಯೆ ಎರಡು ವರ್ಷಗಳಿಂದ ಮುಂದುವರಿದಿದ್ದು, ಈ ಬಗ್ಗೆ ಪ್ರತಿಭಟನೆ ಹಾಗೂ ಹೈಕೋರ್ಟ್ ಹೋರಾಟ ನಡೆದಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದು ವರದಿ ತಿಳಿಸಿದೆ. ಸಚಿವ ಸಂಪುಟ ಸಭೆ ನಡೆಯುವ ಪಡೀಲ್ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಲು ವಕೀಲರು ಉದ್ದೇಶಿಸಿದ್ದರು.

Star Of Kudla

Learn More →

Leave a Reply

Your email address will not be published. Required fields are marked *