ಹಿಂದಿ ಹೇರಿಕೆ ಹಾಗೂ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ

ಉಡುಪಿ: ಹಿಂದಿ ಹೇರಿಕೆ ಹಾಗೂ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ ಬಣ) ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ರಾಜಾಭಾಷಾ ಆಯೋಗ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ. ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ. ಇರುವುದು ನೆಲದ ಭಾಷೆಗಳು, ಜನರ ಭಾಷೆಗಳು. ರಾಜಭಾಷೆ ಎಂಬುದೇ ಪ್ರಜಾಪ್ರಭುತ್ವ ವಿರೋಧಿ. ಹೀಗಾಗಿ ಒಕ್ಕೂಟ ಸರ್ಕಾರ ರಾಜಭಾಷಾ ಆಯೋಗವನ್ನು ಈ ಕೂಡಲೇ ರದ್ದುಪಡಿಸಬೇಕು. ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರುವುದನ್ನು ನಾವು ಸಹಿಸುವುದಿಲ್ಲ. ಹಿಂದಿಹೇರಿಕೆ ದೇಶಕ್ಕೆ ಮಾರಕ ಮಾತ್ರವಲ್ಲ, ಭಾರತದ ಐಕ್ಯತೆಗೆ ಧಕ್ಕೆ ತರುತ್ತಿದೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕರವೇ ಜಿಲ್ಲಾಧ್ಯಕ್ಷ ಅರಾ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷ ಅನಿಲ್ ಪೂಜಾರಿ, ಅಜರುದ್ದಿನ್, ಜಿಲ್ಲಾ ಸಂಚಾಲಕರಾದ ಕೃಷ್ಣಪಂಗಾಳ, ಜಿಲ್ಲಾ ಸಂಚಾಲಕರಾದ ಸುಧಾಕರ್ ಕಲ್ಮಾಡಿ, ಕಾಪು ತಾಲೂಕು ಅಧ್ಯಕ್ಷ ವೀರೇಶ್, ಕಾರ್ಕಳ ತಾಲೂಕು ಅಧ್ಯಕ್ಷ ಇಮ್ರಾನ್ ಶೇಕ್, ಕುಂದಾಪುರ ತಾಲೂಕು ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!