ಜಾರಿ ನಿರ್ದೇಶನಾಲಯ (ಇ.ಡಿ.)ದ ಪರ ಹೈಕೋರ್ಟ್ ವಕೀಲರಾಗಿ ಪುತ್ತೂರಿನ ರಾಜಾರಾಮ ಸೂರ್ಯಂಬೈಲ್ ನೇಮಕ

ಮಂಗಳೂರು: ಕೇಂದ್ರ ಸರಕಾರದ ಆಧೀನದಲ್ಲಿ ಬರುವ ಜಾರಿ ನಿರ್ದೇಶನಾಲಯ (ಇ.ಡಿ.)ದ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಲು ವಕೀಲರಾಗಿ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರ್ಯಂಬೈಲು ನಿವಾಸಿ, ಪ್ರಸ್ತುತ ಬೆಂಗಳೂರಿನ ಕರ್ನಾಟಕ ಹೈಕೋರ್ಟ್‌ನ ವಕೀಲರಾದ ರಾಜಾರಾಮ ಸೂರ್ಯಂಬೈಲ್ ಕೇಂದ್ರದಿಂದ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ಕರ್ನಾಟಕ ಹೈಕೋರ್ಟ್ ಬೆಂಗಳೂರು ವಿಭಾಗಕ್ಕೆ ನ್ಯಾಯವಾದಿಗಳನ್ನು ನೇಮಿಸಲಾಗಿದ್ದು ಅವರಲ್ಲಿ ರಾಜಾರಾಮ ಸೂರ್ಯಂಬೈಲ್ ಓರ್ವರಾಗಿದ್ದು, ಪೆರ್ಲ ಸತ್ಯನಾರಾಯಣ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣ, ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣವನ್ನು, ವಿವೇಕಾನಂದ ಪದವಿ ಕಾಲೇಜಿನಲ್ಲಿ ಪದವಿ, ಎಸ್‌ಡಿಎಂ ಲಾ ಕಾಲೇಜು ಮಂಗಳೂರಿನಲ್ಲಿ ಎಲ್‌ಎಲ್‌ಬಿ, ಎಲ್‌ಎಲ್‌ಮ್ ಉನ್ನತ ಶಿಕ್ಷಣವನ್ನು ಮಾಡಿರುತ್ತಾರೆ.
ಕಳೆದ 10 ವರ್ಷಗಳಿಂದ ಇವರು ಕೇಂದ್ರ ಸರಕಾರದ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಬಿಡಿಎ ವಕೀಲರಾಗಿ, ಅರ್ಬನ್‌ ಡೆವಲಪ್‌ಮೆಂಟ್,ವಾಟರ್ ಸಪ್ಲಾಯ್, ಸಿವೇಜ್‌ ಬೋರ್ಡ್‌ನ ಹೈಕೋರ್ಟ್ ವಕೀಲರಾಗಿಯೂ ಅನುಭವವಿರುವ ಇವರು ಕೇಂದ್ರ ಸರಕಾರದ ಪರವಾಗಿ ಬ್ಯಾಂಕಿಂಗ್ ಸಮಸ್ಯೆಗಳ ಕುರಿತು ಹಲವು ವರ್ಷಗಳಿಂದ ಹೈಕೋರ್ಟ್‌ನಲ್ಲಿ ನ್ಯಾಯವಾದಿಗಳಾಗಿದ್ದು . ಪೆರ್ಲ ಸತ್ಯನಾರಾಯಣ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯಶಿಕ್ಷಕ ಬಿ. ಎಸ್. ಆರ್. ನರಸಿಂಹ ಭಟ್ ಮತ್ತು ಮನೋರಮಾ ದಂಪತಿ ಪುತ್ರರಾಗಿರುವ ಇವರು ಪತ್ನಿ ಶ್ರೀವಿದ್ಯಾ ಹಾಗೂ ಪುತ್ರಿಯಾದ ಈಶಾನಿ ಮತ್ತು ಶಿವಾನಿರವರೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.
ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿ ನ್ಯಾಯವಾದಿಗಳಾಗಿ ಇರುವ ಇವರ ಸಾಧನೆಗೆ ಕುಟುಂಬ ವರ್ಗ, ಬಂಧು ಮಿತ್ರರು ಶುಭ ಹಾರೈಸಿ ಸಂತಸ ವ್ಯಕ್ತಪಡಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!