ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.18 ರಂದು ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಸಮರ್ಪಣೆ

ದಕ್ಷಿಣಕನ್ನಡ: ಇತಿಹಾಸ ಪ್ರಸಿದ್ಧ ಮಹತೋಭಾರ ಮಹಲಿಂಗೇಶ್ವರ ದೇವಸ್ಥಾನದಲ್ಲಿ ಇತಿಹಾಸದಲ್ಲೇ ಮೊದಲಬಾರಿಗೆ ದೇವರ ವಿಗ್ರಹಕ್ಕೆ ಎಳ್ಳೆಣ್ಣೆ ಅಭಿಷೇಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಈ ಹಿಂದೆ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಈ ನಿರ್ಧಾರಕ್ಕೆ ಬರಲಾಗಿದೆ. ಮೋದಕ ಹೋಮ, ತುಪ್ಪದೀಪ, ಶುದ್ದ ಎಣ್ಣೆ, ಗಾಯತ್ರಿ ಪೂಜೆ ಸಹಿತ ದೇವರಿಗೆ ಪ್ರೀತ್ಯರ್ಥವಾಗಿ ಭಕ್ತರ ಬೇಡಿಕೆಯಂತೆ ಹಲವು ಸೇವೆಗಳನ್ನು ನೆರವೇರಿಸಲು ಕಾರಣಕರ್ತರಾದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೈವಜ್ಞರು ಉಲ್ಲೇಘಿಸಿದ ರೀತಿಯಲ್ಲೇ ದೀಪಾವಳಿಯ ಅಕ್ಟೋಬರ್ 18 ರಂದು ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಸಮರ್ಪಣೆ ಮಾಡಲಿದ್ದಾರೆ. ಭಕ್ತರಿಗೆ ಎಳ್ಳೆಣ್ಣೆ ಸಮರ್ಪಣೆ ಅವಕಾಶಕ್ಕಾಗಿ ಚಾಲನೆ ನೀಡಲಾಗಿದೆ.

ದೇವಳದ ಹಿಂದಿನ ಆಡಳಿತ ಸಮಿತಿ ನಡೆಸಿದ ಅಷ್ಟಮಂಗಲ ಪ್ರಶ್ನಾಚಿಂತನೆಯ ವಿಚಾರಗಳನ್ನು ಪುಸ್ತಕರೂಪಕ್ಕೆ ತಂದಿದ್ದರು. ಅದರಲ್ಲಿ ದೈವಜ್ಞರು ಉಲ್ಲೇಖಿಸಿರುವಂತೆ ಶಿವ ದೇವರಿಗೆ ಎಳ್ಳೆಣ್ಣೆ ಸಮರ್ಪಣೆಯನ್ನು ಇದೀಗ ಈಗಿನ ಆಡಳಿತ ಸಮಿತಿ ಕಾರ್ಯರೂಪಕ್ಕೆ ತಂದಿದ್ದಾರೆ. ಬೆಳಗ್ಗೆ ಶ್ರೀ ದೇವರ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡಿ ತುಪ್ಪದ ದೀಪ ಬೆಳಗಿಸಿ ಎಳ್ಳೆಣ್ಣೆ ಸಮರ್ಪಣೆಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್‌ ಪಂಜಿಗುಡ್ಡೆಯವರು ಚಾಲನೆ ನೀಡಿದರು.

ಈಶ್ವರ ಭಟ್‌ ಪಂಜಿಗುಡ್ಡೆಯವರು ಪ್ರಥಮವಾಗಿ ಎಳ್ಳೆಣ್ಣೆ ಖರೀದಿಸಿದರು. ಇವರ ಜೊತೆ ಸಮಿತಿ ಸದಸ್ಯರು, ಭಕ್ತರು ಜೊತೆಯಲ್ಲಿ ಎಳ್ಳೆಣ್ಣೆ ಖರೀದಿಸಿ ಎಳ್ಳೆಣ್ಣೆ ಶೇಖರಣಾ ಡಬ್ಬಿಗೆ ಎರೆಯಲಾಯಿತು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಈಶ್ವರ ಬೆಡೇಕ‌ರ್, ಸುಭಾಶ್‌ ರೈ ಬೆಳ್ಳಿಪ್ಪಾಡಿ, ಹಿರಿಯರಾದ ಕಿಟ್ಟಣ್ಣ ಗೌಡ, ಶಿವರಾಮ ಆಳ್ವ, ಭಾಸ್ಕರ್ ಬಾರ್ಯ, ಗೋವರ್ಧನ್ ಕಾವೇರಿಕಟ್ಟೆ, ಗೋವಿಂದ ಭಟ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕರೂ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು ಆಗಿರುವ ವೇ ಮೂ ವಸಂತ ಕೆದಿಲಾಯ ಅವರು ವಿಶೇಷ ಪ್ರಾರ್ಥನೆ ಮಾಡಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!