ಗೆರಟೆಯಲ್ಲಿ ಮೂಡಿದ ಪಂಜುರ್ಲಿ ದೈವದ ಮುಖವಾಡ, ಯಕ್ಷಗಾನ ಕಲಾವಿದನ ಕಲಾ ಪ್ರೌಢಿಮೆ

ದಕ್ಷಿಣಕನ್ನಡ: ಇಂದು ಎಲ್ಲೆಡೆ ಕಾಂತಾರ ಸಿನಿಮಾದ ಹವಾನೇ ಜೋರಾಗಿದೆ. ಕಾಂತಾರ ಸಿನಿಮಾದಲ್ಲಿ ಪ್ರಮುಖ ಹೈಲೈಟ್ ತುಳುನಾಡಿದ ದೈವಾರಾಧನೆ. ತುಳುನಾಡಿನ ಪ್ರಮುಖ ದೈವಗಳಲ್ಲಿ ಒಂದಾದ ಪಂಜುರ್ಲಿಯ ಕಥೆಯನ್ನೇ ಮುಖ್ಯವಾಗಿರಿಸಿ ಕಾಂತಾರಾ ಚಿತ್ರಕಥೆ ಹೆಣೆಯಲಾಗಿದೆ. ಪಂಜುರ್ಲಿ ದೈವದ ಪ್ರಮುಖ ಆಕರ್ಷಣೆ ಅದರ ಮುಖವಾಡವಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪುಣಚದ ಯಕ್ಷಗಾನ ಕಲಾವಿದರೊಬ್ಬರು ಗೆರಟೆಯಲ್ಲಿ ಪಂಜುರ್ಲಿ ಮುಖವಾಡವನ್ನು ತಯಾರಿಸುವ ಮೂಲಕ ತಮ್ಮ ಕಲಾಪ್ರೌಢಿಮೆ ಮೆರೆದು ಸುದ್ಧಿಯಲ್ಲಿದ್ದಾರೆ.

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಅಜೇರು ನಿವಾಸಿ ಸಚ್ಚಿದಾನಂದ ಪ್ರಭು ಗೆರಟೆಯಲ್ಲಿ ಪಂಜುರ್ಲಿ ಮುಖವಾಡ ತಯಾರಿಸಿದ ಕಲಾವಿದರಾಗಿದ್ದಾರೆ. ಯಕ್ಷಗಾನದಲ್ಲಿ ವಿದೂಷಕನ ಪಾತ್ರ ನಿರ್ವಹಿಸುತ್ತಿರುವ ಸಚ್ಷಿದಾನಂದ ಪ್ರಭು ತಮ್ಮ ಬಿಡುವಿನ ಸಮಯದಲ್ಲಿ ಗೆರಟೆಯಲ್ಲಿ ಕಲಾಕೃತಿಗಳನ್ನು ಮಾಡಿ ಮಾರಾಟ ಮಾಡುವ ವೃತ್ತಿಯಲ್ಲೂ ತೊಡಗಿಕೊಂಡಿದ್ದಾರೆ.

ಗೆರಟೆಯನ್ನು ಬಳಸಿಕೊಂಡು ಇಂದು ಹಲವರು ವಿವಿಧ ರೀತಿಯ ಕಲಾಕೃತಿ ಮತ್ತು ಗೃಹೋಪಯೋಗಿ ವಸ್ತುಗಳನ್ನು ತಯಾರಿಸುತ್ತಿದ್ದಾರೆ‌ ಇದರಿಂದ ಕೊಂಚ ಭಿನ್ನವಾಗಿರಬೇಕೆಂದು ಸಚ್ಚಿದಾನಂದ ಪ್ರಭು ಗೆರಟೆಯನ್ನು ಬಳಸಿಕೊಂಡು ಶಂಖ, ದೀಪ, ದೊಡ್ಡ ದೀಪ ಮೊದಲಾದ ವಸ್ತುಗಳನ್ನು ತಯಾರಿಸಿ ಗಮನಸೆಳೆದಿದ್ದಾರೆ.

ಆದರೆ ಈ ಎಲ್ಲಾ ಕಲಾಕೃತಿಗಳಲ್ಲಿ ಅವರು ಇತ್ತೀಚೆಗೆ ತಯಾರಿಸಿದ ಪಂಜುರ್ಲಿ ದೈವದ ಮುಖವಾಡ ಎಲ್ಲರ ಗಮನಸೆಳೆದಿದೆ. ಹಂದಿಯ ತಲೆಯ ಮಾದರಿಯಲ್ಲಿರುವ ಪಂಜುರ್ಲಿ ದೈವದ ಮುಖವಾಡ ಕಲಾವಿದನಿಗೆ ಆಕರ್ಷಣೆಯಾಗಿ‌ ಕಂಡುಬಂದ ಹಿನ್ನಲೆಯಲ್ಲಿ ಗೆರಟೆಯನ್ನು ಉಪಯೋಗಿಸಿ ಯಾಕೆ ಈ‌ ಮುಖವಾಡವನ್ನು ಮಾಡಬಾರದು ಎನ್ನುವ ಯೋಚನೆ ಮೂಡಿತ್ತು. ಅದರಂತೆ ಕಾರ್ಯಪ್ರವೃತ್ತರಾಗಿದ್ದ ಸಚ್ಚಿದಾನಂದ ಪ್ರಭು ನಿರಂತರ ಎರಡು ತಿಂಗಳ ಕಾಲ ಶ್ರಮವಹಿಸಿ ಅದ್ಭುತವಾಗಿ ಪಂಜುರ್ಲಿ ದೈವದ ಮುಖವಾಡ ತಯಾರಿಸಿದ್ದಾರೆ.

ಈ ಪಂಜುರ್ಲಿಯ ಮುಖವಾಡವನ್ನು ಪ್ರದರ್ಶನಕ್ಕಾಗಿಯೂ ಕೊಂಡೊಯ್ಯುತ್ತಾರೆ‌. ಆ ಸಂದರ್ಭದಲ್ಲಿ ಇದನ್ನು ವೀಕ್ಷಣೆ ಮಾಡಲು ಬಂದ ಜನ ಕಾಲಲ್ಲಿದ್ದ ಚಪ್ಪಲಿ ತೆಗೆದು ನಮಸ್ಕರಿಸಿದ ಹಲವು ಘಟನೆಗಳು ಇದೆ ಎನ್ನುತ್ತಾರೆ ಕಲಾವಿದರಾದ ಸಚ್ಚೀದಾನಂದ ಪ್ರಭು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!