
ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಈಗ ಮಂಗಳೂರಿನವರೆಗೆ ವಿಸ್ತರಣೆ.
ಮನವಿಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ Ashwini Vaishnaw
ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಮಧ್ಯಾಹ್ನ 3.05ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05ಕ್ಕೆ ಹೊರಟು ಮಂಗಳೂರಿಗೆ ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರದ ಆರು ದಿನಗಳ ಕಾಲ ಈ ವಂದೇ ಭಾರತ್ ರೈಲು ಸಂಚರಿಸುವುದರಿಂದ ಈ ಭಾಗದಲ್ಲಿ ಓಡಾಡುವ ಹಲವು ಪ್ರಯಾಣಿಕರಿಗೆ ಅನುಕೂಲವಾಗಲಿದೆ.


