
ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ಇನ್ನೊಬ್ಬರು ನಾನು ಕಿರಾಣಿ ಅಂಗಡಿ ಪ್ರಾರಂಭಿಸಿದ್ದು ಮಧ್ಯ ಮಾರಾಟಕ್ಕೆ ಪರವಾನಿಗೆ ನೀಡುವಂತೆ ಮನವಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.


ಹಿರಿಯೂರು ತಾಲೂಕಿನ ಐಮಂಗಲ ಹೋಬಳಿ ಬುರುಜನರೊ ಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹೊಸ ನಾಯಕರಹಟ್ಟಿ ಗ್ರಾಮದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಮಿತಿಯ ಹೆಚ್ ಹೆಚ್. ಸಿ ಚಂದ್ರಶೇಖರ್ ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಇವರು ಹಿರಿಯೂರು ಅಬಕಾರಿ ನಿರೀಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ತಮ್ಮ ಮನವಿ ಪತ್ರದಲ್ಲಿ ಹೊಸ ನಾಯಕರ ಹಟ್ಟಿ ವಾಸಿಯಾಗಿದ್ದು ನಾನು ನಮ್ಮ ಮನೆಯಲ್ಲಿ ಒಂದು ಚಿಲ್ಲರೆ ಅಂಗಡಿಯನ್ನು ತೆರೆಯುತ್ತಿದ್ದು ಈ ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಉತ್ಸುಕನಾಗಿದ್ದು ತಾವುಗಳು ದಯಮಾಡಿ ನನ್ನ ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಅನುಮತಿ ನೀಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ದಿನಾಂಕ 21-2-2024 ರಂದು ಹಿರಿಯೂರು ಅಬಕಾರಿ ಉಪನಿರೀಕ್ಷಕರ ಕಚೇರಿಗೆ ಮನವಿ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗ್ರಾಮೀಣ ಭಾಗದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡಲೆಂದೇ ಡಬ್ಬಾ ಅಂಗಡಿಗಳನ್ನು ಪ್ರಾರಂಭಿಸಿ ಕಿರಾಣಿ ಸಾಮಾನುಗಳ ಜೊತೆ ಮಾರಾಟ ಮಾಡುತ್ತಾರೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಮನವಿ ನೀಡಿರುವುದನ್ನು ಕಂಡಿದ್ದೇವೆ ಆದರೆ ಹೊಸ ನಾಯಕರು ಹಟ್ಟಿ ಚಂದ್ರಶೇಖರ್ ಎಂಬುವರು ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಅನುಮತಿ ಕೋರಿ ಅಬಕಾರಿ ಇಲಾಖೆಗೆ ಮನವಿ ನೀಡಿರುವುದು ವಿಶೇಷವಾಗಿದೆ ಈ ಬಗ್ಗೆ ಅಬಕಾರಿ ಇಲಾಖೆ ಪರವಾನಿಗೆ ನೀಡುತ್ತೋ ಇಲ್ಲವೋ ಕಾದು ನೋಡಬೇಕಾಗಿದೆ.


