
ಮಂಗಳೂರು: ಮೀನು ಸಾಗಾಟದ ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಮಗುಚಿಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಜಪ್ಪಿನಮೊಗರು ನೇತ್ರಾವತಿ ಸೇತುವೆ ಬಳಿ ಸಂಭವಿಸಿದೆ.
ಗಾಯಗೊಂಡವರನ್ನು ರತೀಶ್ (38), ಶೈಲಜಾ (57) ಹಾಗೂ ಶಾರದಾ (60) ಎಂದು ಪೊಲೀಸರು ತಿಳಿಸಿದ್ದಾರೆ. ಮೂವರನ್ನೂ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಬೆಳಗ್ಗೆ ಸುಮಾರು 6 ಗಂಟೆಯ ಸುಮಾರಿಗೆ ಮಂಗಳೂರಿನಿಂದ ಕೇರಳದ ತಲಪಾಡಿ ಕಡೆಗೆ ತೆರಳುತ್ತಿದ್ದ ಕೆಎಲ್ 14 ಎನ್ 8273 ನಂಬರ್ನ ಪಿಕ್ ಅಪ್ ವಾಹನವು ಚಾಲಕನ ನಿರ್ಲಕ್ಷ್ಯದಿಂದ ಸ್ಕಿಡ್ ಆಗಿ ಮಗುಚಿಬಿದ್ದಿದ್ದು, ಇದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.


