ತಂದೆ-ಮಗಳು ಆತ್ಮಹತ್ಯೆಗೆ ಯತ್ನ – ಪೊಲೀಸರ ಸಮಯೋಚಿತ ಕಾರ್ಯದಿಂದ ಜೀವ ರಕ್ಷಣೆ

ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ತಂದೆ ತನ್ನ ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಅಂಬಿಕನಗರದ ನಿವಾಸಿ ರಾಜೇಶ್ ಎಂಬವರು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಪಣಂಬೂರು ಬೀಚ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಘಟನೆಯ ನಂತರ ರಾಜೇಶ್ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ, ಠಾಣೆಯ ಗುಪ್ತ ವಾರ್ತೆ ಹಾಗೂ ಕ್ರೈಂ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬಾಗಿಲು ಮುರಿದು ತಂದೆ-ಮಗಳನ್ನು ರಕ್ಷಿಸಿದ್ದಾರೆ. ನಂತರ ಇವರನ್ನು ಕಾವೂರು ಠಾಣೆಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸುವ ವೇಳೆ ಮಗಳು “ಆತ್ಮಹತ್ಯೆ ಮಾಡ್ಬೇಡ ಅಪ್ಪ” ಎಂದು ಹೇಳಿದ ಮಾತು ಎಲ್ಲರ ಮನಸ್ಸು ಕಲುಕುವಂತಾಗಿದೆ.

ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಿದ ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಇಬ್ಬರ ಜೀವ ಉಳಿದಿದ್ದು, ಈ ಸಾಹಸಕ್ಕೆ ನಗರದಲ್ಲಿ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *