
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಈಜುಕೊಳಕ್ಕೆ ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಅನುದಾನವನ್ನಿಟ್ಟು ಮಂಜೂರು ಮಾಡುವಂತೆ ಆಗ್ರಹಿಸಿ ಪ್ರಧಾನ ಕಾರ್ಯದರ್ಶಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಪ್ರಧಾ ನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು. ಮುಂಡೂರಿನಲ್ಲಿ ನಿರ್ಮಾಣವಾಗಲಿರುವ ತಾಲೂಕು ಕ್ರೀಡಾಂಗಣದ ಬಳಿ 9 ಕೋಟಿ ರೂ ವೆಚ್ಚದಲ್ಲಿ ಈ ಈಜುಕೊಳ ನಿರ್ಮಾಣವಾಗಲಿದೆ.ಕ್ರೀಡಾಂಗಣಕ್ಕೆ ಈಗಾಗಲೇ ಜಾಗ ನಿಗಧಿ ಮಾಡಲಾಗಿದ್ದು ಕಾಮಗಾರಿ ಆರಂಭಗೊಂಡಿದೆ. ಇದೇ ಕ್ರೀಡಾಂಗಣದ ಬಳಿ ನಿರ್ಮಾಣವಾಗು ಈಜು ಕೊಳಕ್ಕೆ ಅನುದಾನವನ್ನು ನೀಡುವಿದಾಗಿದೆ


