ಪುತ್ತೂರು :ಕಾರ್ಮಿಕರ ನ್ಯಾಯಯುತ ಹಕ್ಕುಗಳನ್ನು ಸರಕಾರದ ಗಮನಕ್ಕೆ ತರುವಂತೆ ಬಿ.ಎಂ.ಎಸ್ನ ಜಿಲ್ಲಾಧ್ಯಕ್ಷ ವಕೀಲ ಅನಿಲ್ ಕುಮಾರ್ ಯು ಅವರ ನೇತೃತ್ವದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿ ಮದ್ದೂರ್ ಸಂಘದ ರಾಜ್ಯ ಕಾರ್ಯಕಾರಿಣಿ ಪುರಂದರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ, ಹಿರಿಯ ಮುಖಂಡ ದೇವಪ್ಪ ಗೌಡ, ಬಿಎಂಎಸ್ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಮರೀಲು, ಅಧ್ಯಕ್ಷ ಹೇಮಂತ್ ಎನ್, ಪ್ರಧಾನ ಕಾರ್ಯದರ್ಶಿ ಸಚಿನ್, ಕೋಶಾಧಿಕಾರಿ ಶಿವಪ್ರಸಾದ್ ಆಚಾರ್ಯ, ಸದಸ್ಯ ಪ್ರಶಾಂತ್ ಕೃಷ್ಣನಗರ ಉಪಸ್ಥಿತರಿದ್ದರು.


