ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ವೀರಮಂಗಲ ನಿವಾಸಿ ಸತೀಶ್ ಕುಮಾರ್ ಅವರ ಮನೆಯವರು ಮನೆಯ ಆಧಾರಸ್ತಂಭ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದು, ಮನೆಯವರನ್ನು ವಜ್ರತೇಜಸ್ ತಂಡದಿಂದ ಮನೆಗೆ ಭೇಟಿ ನೀಡಿ ಸಹಾಯಧನ ನೀಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿಯಾದ ಶ್ರೀಧರ್ ತೆಂಕಿಲ, ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಲಿ ಹಾಗೂ ಬಜರಂಗದಳ ಗ್ರಾಮಾಂತರ ಪ್ರಖಂಡ ಗೋರಕ್ಷಾ ಪ್ರಮುಖರಾದ ಪ್ರದೀಪ್ ಅಜಲಡ್ಕ ಉಪಸ್ಥಿತರಿದ್ದರು.


