ಪುತ್ತಿಲ ಪರಿವಾರ ಮೋದಿ ಪರಿವಾರದೊಂದಿಗೆ ವಿಲೀನ

ಕಳೆದೊಂದು ವರ್ಷದಿಂದ ಕಗ್ಗಂಟಾಗಿ ಉಳಿದಿದ್ದ ಅರುಣ್ ಪುತ್ತಿಲ ಮತ್ತು ಬಿಜೆಪಿ ಸೇರ್ಪಡೆ ವಿಚಾರ ಕೊನೆಗೂ ಮಾ 14 ರಂದು ಇಳಿ ಸಂಜೆ ಮುಕ್ತಾಯಗೊಂಡಿತ್ತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ವಿಜಯೇಂದ್ರ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ಅರುಣ್ ಪುತ್ತಿಲ ಬೇಷರತ್ತಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು . ಆ ಬಳಿಕ ಅರುಣ್ ಪುತ್ತಿಲ ಹಾಗೂ ಸುನಿಲ್ ಕುಮಾರ್ ಜಂಟಿ ಪತ್ರಿಕಾಗೋಷ್ಟಿ ನಡೆಸಿದರು.

ಈ ಸಂದರ್ಭಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ್ ರಾವ್, ಪುತ್ತಿಲ ಪರಿವಾರದ ಮುಖಂಡರಾದ ಪ್ರಸನ್ನ ಮಾರ್ತಾ , ಉಮೇಶ್ ಕೋಡಿಬೈಲು ಮತ್ತಿತ್ತರರು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರವನ್ನು ಬಿಜೆಪಿ ಜತೆ ವಿಲೀನಗೊಳಿಸಲಾಗಿದೆಯೇ ? ಅರುಣ್ ಪುತ್ತಿಲರಿಗೆ ಮುಂಬರುವ ದಿನಗಲಲ್ಲಿ ಯಾವ ಹುದ್ದೆ ಸಿಗಲಿದೆ ಎನ್ನುವುದು ಸ್ಪಷ್ಟವಾಗಿಲ್ಲ . ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷದ ಅಭ್ಯರ್ಥಿಯ ಆಯ್ಕೆಯಲ್ಲಿ ಕಾರ್ಯಕರ್ತರ ಭಾವನೆಗಳಿಗೆ ಗೌರವ ನೀಡಿಲ್ಲ ಎಂದು ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಬಳಿಕ ಕೂಡ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಮಧ್ಯೆ ಹಗ್ಗ ಜಗ್ಗಾಟ ಮುಂದುವರಿದಿತ್ತು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಪುತ್ತೂರಿನಲ್ಲಿ ಅವರಿಬ್ಬರು ಪರಸ್ಪರ ಸ್ಪರ್ಧಿಸಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!