
ಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಹಿಮಾಚಲ ಪ್ರದೇಶದ (Himachal Pradesh) ಆರು ಕಾಂಗ್ರೆಸ್ (Congress) ಬಂಡಾಯ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸದನದಲ್ಲಿ ಉಪಸ್ಥಿತರಿರುವ ವಿಪ್ ಅನ್ನು ಧಿಕ್ಕರಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿದ್ದು, ಕಟ್ ಮೋಷನ್ ಮತ್ತು ಬಜೆಟ್ ಸಮಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರು. ಹಿಮಾಚಲ ಪ್ರದೇಶದ ಆರು ಬಂಡಾಯ ಶಾಸಕರು- ಸುಧೀರ್ ಶರ್ಮಾ, ರವಿ ಠಾಕೂರ್, ಇಂದರ್ ದತ್ ಲಖನ್ಪಾಲ್, ದೇವೇಂದ್ರ ಭುಟ್ಟೋ, ರಾಜೇಂದ್ರ ರಾಣಾ ಮತ್ತು ಚೈತನ್ಯ ಶರ್ಮಾ ಅವರು ಹಿಮಾಚಲ ಪ್ರದೇಶ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.
ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಸರ್ಕಾರವನ್ನು ಬೆಂಬಲಿಸಿದ ಆರು ಬಂಡಾಯ ಕಾಂಗ್ರೆಸ್ ಶಾಸಕರು ಮತ್ತು ಮೂವರು ಸ್ವತಂತ್ರರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ ನಂತರ ಹಿಮಾಚಲದ ರಾಜಕೀಯ ಸನ್ನಿವೇಶವು ನಾಟಕೀಯ ತಿರುವು ಪಡೆದುಕೊಂಡಿತು.


