ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!

ಬೆಂಗಳೂರು, ಮಾ.29: ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿ ಪ್ರಮುಖ ಆರೋಪಿಗಳೆಂದು ಎನ್​ಐಎ ಗುರುತಿಸಿರುವ ಮುಸಾವಿರ್ ಹುಸೇಬ್ ಶಜೀಬ್ ಮತ್ತು ಅಬ್ದುಲ್ ಮತೀನ್ ತಾಹ ಎಂಬಿಬ್ಬರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಹತ್ತು ಲಕ್ಷ ರು. ಬಹುಮಾನ ಘೋಷಿಸಲಾಗಿದೆ. ಶಂಕಿತರಾದ ಮುಸಾವೀರ್‌ ಹುಸೇನ್‌ ಶಾಜೀದ್‌ ಹಾಗೂ ಅಬ್ದುಲ್‌ ಮತೀನ್‌ ಅಹ್ಮದ್‌ ತಾಹಾ ಅವರಿರುವ ಸ್ಥಳದ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡಲಾಗುವುದು. ಶಂಕಿತರ ಸುಳಿವು ಕೊಟ್ಟವರ ಹೆಸರನ್ನು ಗೋಪ್ಯವಾಗಿಡಲಾಗುವುದು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

‘ಸದ್ಯದ ಎನ್‌ಐಎ ತನಿಖೆಯಲ್ಲಿ, ತೀರ್ಥಹಳ್ಳಿಯ ಶಂಕಿತ ಮುಸಾವೀರ್‌ ಹುಸೇನ್‌ ಶಾಜೀದ್‌ ಎಂಬಾತನೇ ಮಾರ್ಚ್‌ 1ರಂದು ಬ್ಯಾಗ್‌ನಲ್ಲಿ ದಿ ರಾಮೇಶ್ವರ ಕೆಫೆಗೆ ಬಾಂಬ್‌ ತಂದಿಟ್ಟಿದ್ದ ಎಂಬುದು ಗೊತ್ತಾಗಿದೆ. ಈತನ ಕೃತ್ಯಕ್ಕೆ ತೀರ್ಥಹಳ್ಳಿಯ ಇನ್ನೊಬ್ಬ ಶಂಕಿತ ಅಬ್ದುಲ್‌ ಮತೀನ್‌ ಅಹ್ಮದ್ ತಾಹಾ ಸಹಕಾರ ನೀಡಿದ್ದ. ಇವರು ನಡೆಸಿದ್ದ ಕೃತ್ಯಕ್ಕೆ ತನಿಖೆ ವೇಳೆ ಪುರಾವೆಗಳು ಸಿಕ್ಕಿವೆ. ಅಲ್ಲದೇ ಬಂಧಿತ ಪ್ರಮುಖ ಸಂಚುಕೋರ ಮುಜಮೀಲ್‌ ಶರೀಫ್‌ ವಿಚಾರಣೆಯ ವೇಳೆ ನೀಡಿದ ಮಾಹಿತಿ ಆಧರಿಸಿ, ಇಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಸಾವೀರ್‌ ಹುಸೇನ್‌ ಶಾಜೀದ್‌ಗೆ ಅಂದಾಜು 30 ವರ್ಷ ಇರಬಹುದು. ಈತ ಕಟುಮಸ್ತಾದ ದೇಹ ಹೊಂದಿದ್ದು, ಸುಮಾರು 6 ಅಡಿ 2 ಇಂಚು ಎತ್ತರವಿದ್ದಾನೆ. ಮಹಮ್ಮದ್‌ ಜುನೇದ್‌ ಸೈಯದ್‌ ಹೆಸರಿನಲ್ಲಿ ನಕಲಿ ಚಾಲನಾ ಪರವಾನಗಿ ಹೊಂದಿದ್ದಾನೆ. ಇನ್ನೂ ಹಲವು ನಕಲಿ ದಾಖಲಾತಿ ತಯಾರಿಸಿಕೊಂಡಿದ್ದಾನೆ. ಜೀನ್ಸ್‌ ಪ್ಯಾಂಟ್‌, ಟೀ ಶರ್ಟ್‌, ಸ್ಮಾರ್ಟ್‌ ವಾಚ್‌, ಮಾಸ್ಕ್‌ ಧರಿಸಿ ಓಡಾಟ ನಡೆಸುತ್ತಿದ್ದಾನೆ. ಕೆಲವೊಮ್ಮೆ ವಿಗ್‌ ಹಾಗೂ ನಕಲಿ ಗಡ್ಡ ವೇಷದಲ್ಲಿ ಓಡಾಟ ನಡೆಸುತ್ತಿದ್ದಾನೆ. ಕಡಿಮೆ ದರದ ಹೋಟೆಲ್‌ ಹಾಗೂ ಪುರುಷರ ಹಾಸ್ಟೆಲ್‌ಗಳಲ್ಲಿ ವಾಸ್ತವ್ಯ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ಅಬ್ದುಲ್‌ ಮತೀನ್‌ ಅಹ್ಮದ್ ತಾಹಾ ಎಂಬಾತನಿಗೂ ಅಂದಾಜು 30 ವರ್ಷ ಇರಬಹುದು. ಸಾಧಾರಣ ಮೈಕಟ್ಟು ಹೊಂದಿದ್ದು, 5 ಅಡಿ 5 ಇಂಚು ಎತ್ತರವಿದ್ದಾನೆ. ಮುಂಭಾಗದಲ್ಲಿ ತಲೆಕೂದಲು ಇಲ್ಲ. ವಿಘ್ನೇಶ್‌ ಹೆಸರಿನಲ್ಲಿ ಆಧಾರ್‌ ಕಾರ್ಡ್‌ ಹೊಂದಿದ್ದಾನೆ. ಉಳಿದ ಕೆಲವು ದಾಖಲೆಗಳನ್ನು ಹಿಂದೂ ಯುವಕರ ಹೆಸರಿನಲ್ಲಿ ನಕಲಿ ಆಗಿ ತಯಾರಿಸಿಕೊಂಡಿದ್ದಾನೆ. ಹೆಚ್ಚಾಗಿ ಹಾಸ್ಟೆಲ್‌ಗಳಲ್ಲಿ ಮಾಸ್ತವ್ಯ ಮಾಡುತ್ತಿದ್ದಾನೆ. ಇಬ್ಬರು ಹೊರಗೆ ಓಡಾಟ ನಡೆಸುವಾಗ ನಾನಾ ವೇಷ ಧರಿಸುತ್ತಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಇಬ್ಬರು ಶಂಕಿತರ ಸುಳಿವು ಲಭಿಸಿದ ಕೂಡಲೇ 080–29510900, 8904241100 ಹಾಗೂ ಇ–ಮೇಲ್‌ ವಿಳಾಸ info.blr.nia@gov.inಗೆ ಮಾಹಿತಿ ನೀಡಬಹುದು ಅಥವಾ ವಿಳಾಸ: ರಾಷ್ಟ್ರೀಯ ತನಿಖಾ ದಳ, 3ನೇ ಮಹಡಿ, ಬಿಎಸ್‌ಎನ್‌ಎಲ್ ಟೆಲಿಫೋನ್ ಎಕ್ಸ್‌‌ಚೆಂಜ್, 80 ಅಡಿ ರಸ್ತೆ, ಎಚ್‌ಎಎಲ್ 2ನೇ ಹಂತ, ಇಂದಿರಾನಗರ, ಬೆಂಗಳೂರು 08 –ಇಲ್ಲಿಗೆ ಕಳುಹಿಸಬಹುದು ಎಂದು ಅಧಿಕಾರಿಗಳು ಕೋರಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?