ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್‌ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. 

ಉಳ್ಳಾಲ : ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್‌ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. 

ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ ಪುರುಷೋತ್ತಮ ದ.ಕ. ಲೋಕಸಭಾ ಕ್ಷೇತ್ರದ ಸಂಚಾರಿ ತಂಡದಲ್ಲಿ (ಫೈಯಿಂಗ್ ಸ್ಕ್ಯಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಏಪ್ರಿಲ್. 5ರಂದು ಮಧ್ಯಾಹ್ನದವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮಧ್ಯಾಹ್ನ ವೇಳೆಗೆ ಅಪರಿಚಿತನೊಬ್ಬನಿಂದ ಅವರಿಗೆ ವಾಟ್ಸ್‌ಆ್ಯಪ್ ಕರೆಯೊಂದು ಬಂದಿದೆ.

ಅತ್ತಕಡೆಯಿಂದ ಮಾತನಾಡುತ್ತಿದ್ದ ವ್ಯಕ್ತಿ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ. ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಫೋನ್ ಕೊಟ್ಟಿದ್ದಾನೆ. ಆತ ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಸರಿ ಮಾಡುವುದಾದರೆ ಮಾಡುವ ಎಂದು ಹೇಳಿ ಮೊದಲು ಮಾತನಾಡಿದ್ದ ವ್ಯಕ್ತಿಗೆ ಫೋನ್ ಕೊಟ್ಟಿದ್ದ. ಅಲ್ಲದೇ 80 ಸಾವಿರ ರೂ.ವನ್ನು ಫೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು ಎನ್ನಲಾಗಿದೆ.

News Editor

Learn More →

Leave a Reply

Your email address will not be published. Required fields are marked *