ಮಂಗಳೂರು: ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆಯಲ್ಲಿ ಸದಸ್ಯರನ್ನು ಕಟ್ಟಿಹಾಕಿ ದರೋಡೆ.

ಮಂಗಳೂರು:  ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆಯಲ್ಲಿ ದರೋಡೆ ನಡೆದ ಘಟನೆ ಶುಕ್ರವಾರ ರಾತ್ರಿ ೮ ಗಂಟೆ ವೇಳೆಗೆ ನಡೆದಿದೆ.


ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ನುಗ್ಗಿದ ದರೋಡೆಕೋರರ ತಂಡ ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ದರೋಡೆಗೈದಿದೆ. ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ 8-9 ಮಂದಿಯಿದ್ದ ತಂಡ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದೆ. ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ ತಂಡದ ಸದಸ್ಯರು ಚೂರಿ ತೋರಿಸಿ ಮನೆಯವರನ್ನು ಹೆದರಿಸಿದ್ದಾರೆ

ಬಳಿಕ ಮನೆಯಲ್ಲಿದ್ದವರನ್ನು ಬೆಡ್ ಶೀಟ್ ಬಳಸಿ ಕೈಕಾಲುಗಳನ್ನು ಕಟ್ಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಮನೆಯ ಒಳಗೆಲ್ಲ ತಡಕಾಡಿ ಸಿಕ್ಕಿದ ನಗದು ಹಣ ಮತ್ತು ಒಡವೆಗಳನ್ನು ದೋಚಿದ್ದಾರೆ. ಬಳಿಕ ಮನೆ ಮಾಲೀಕನ ವಾಹನವನ್ನು ಕದ್ದುಕೊಂಡು ತೆರಳಿದ್ದು ಮನೆಯಿಂದ ಅನತಿ ದೂರದಲ್ಲಿ ಬಿಟ್ಟು ಹೋಗಿದ್ದಾರೆ. ಈ ವೇಳೆ ಪದ್ಮನಾಬ್ ಅವರ ಕೈಗೆ ಚೂರಿಯಿಂದ ಇರಿಯಲಾಗಿದೆ

ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಆರೋಪಿಗಳ ಗುರುತು ಪತ್ತೆ ಹಚ್ಚಲು ಮತ್ತು ಅವರನ್ನು ಶೀಘ್ರವಾಗಿ ಬಂಧಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?