ಪ್ರಭಾಕರ ಭಟ್ ಪರ ವಕಾಲತ್ತು ವಹಿಸಿದ್ದ ಮಂಡ್ಯ ಕಾಂಗ್ರೆಸ್ ಮುಖಂಡ ; ಪಕ್ಷದಿಂದಲೇ ಕಿತ್ತು ಹಾಕಿದ ಕಾಂಗ್ರೆಸ್ ನಾಯಕರು.

ಪ್ರಭಾಕರ ಭಟ್ ಪರ ವಕಾಲತ್ತು ವಹಿಸಿದ್ದ ಮಂಡ್ಯ ಕಾಂಗ್ರೆಸ್ ಮುಖಂಡ ; ಪಕ್ಷದಿಂದಲೇ ಕಿತ್ತು ಹಾಕಿದ ಕಾಂಗ್ರೆಸ್ ನಾಯಕರು

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೋರ್ಟಿನಲ್ಲಿ ವಾದಿಸಿ ಜಾಮೀನು ಕೊಡಿಸಿದ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ

ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೋರ್ಟಿನಲ್ಲಿ ವಾದಿಸಿ ಜಾಮೀನು ಕೊಡಿಸಿದ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಪ್ರಭಾಕರ ಭಟ್ ಅವರಿಗೆ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಭಟ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ವ್ಯಕ್ತಿ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ತಿಳಿಯುತ್ತಿದ್ದಂತೆ ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.

ಪ್ರಕರಣ ಸಂಬಂಧ ಕಲ್ಲಡ್ಕ ಪ್ರಭಾಕರ್ ಭಟ್ ಪರ ಡಿ. ಚಂದ್ರೇಗೌಡ ಅವರು ಕೋರ್ಟಿನಲ್ಲಿ ವಕಾಲತ್ತು ವಹಿಸಿದ್ದರು. ಅಲ್ಲದೆ, ಜನವರಿ 17 ರಂದು ಪ್ರಭಾಕರ್ ಭಟ್​ಗೆ ಜಾಮೀನು ಮಂಜೂರು ಆಗಿತ್ತು. ಇದೇ ವೇಳೆ, ಕಲ್ಲಡ್ಕ ಪ್ರಭಾಕರ್ ಅವರಿಗೆ ಜಾಮೀನು ಕೊಡಿಸಿದ್ದು ಕಾಂಗ್ರೆಸ್ ಮುಖಂಡ ಎನ್ನುವುದು ಚರ್ಚೆಗೆ ಗ್ರಾಸವಾಗಿತ್ತು. ಜಿಲ್ಲಾ ಕಾಂಗ್ರೆಸ್​ ಮುಖಂಡರು ಆಕ್ರೋಶಗೊಂಡು ಕಾಂಗ್ರೆಸ್ ಕಾನೂನು ಘಟಕದ ನಿಯಮದ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಪಕ್ಷದಿಂದಲೇ ಕಿತ್ತು ಹಾಕಿದ್ದಾರೆ. ಈ ಬಗ್ಗೆ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಎಎಸ್ ಗೌರಿಶಂಕರ್ ಅವರು ಚಂದ್ರೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24 ರಂದು ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ್ದ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ” ಎಂದು ಹೇಳಿಕೆ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಾಗಿತ್ತು.

News Editor

Learn More →

Leave a Reply

Your email address will not be published. Required fields are marked *