ಪುತ್ತೂರು ತಾಲ್ಲೂಕು ಈಶ್ವರಮಂಗಲ ಎಂಬಲ್ಲಿಪೊಲೀಸರಿಂದ ಹಲ್ಲೆ ಆರೋಪ – ಗಾಯಾಳು ಎ.ಸಿ. ಟೆಕ್ನಿಷಿಯನ್ ಆಸ್ಪತ್ರೆಗೆ ದಾಖಲು.

ಪುತ್ತೂರು: ಈಶ್ವಮಂಗಲ ಪಂಚೋಡಿಯಲ್ಲಿ ಜು.27ರ ತಡ ರಾತ್ರಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಪೊಲೀಸರು ಮನೆಯಲ್ಲಿದ್ದ
ಯುವಕ ಪುತ್ತೂರು ಕಂಪೆನಿಯೊಂದರ ಎ.ಸಿ.ಮೆಕ್ಯಾನಿಕ್ ಗೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

video byte :

ಈಶ್ವರಮಂಗಲ ಪಂಚೋಡಿ ನಿವಾಸಿ ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳು. ಭ್ರಮೀಷ್ ಅವರ ಎಡ ಕೈಗೆ ಗಾಯವಾಗಿದೆ. ‘ನಾನು ರಾತ್ರಿ ಗಂಟೆ 11ಕ್ಕೆ ಮನೆಯಲ್ಲಿ ಮಲಗಿದ್ದೆ. ಈ ವೇಳೆ ಬಾಗಿಲು ಬಡಿದ ಶಬ್ದ ಆಯಿತು. ಬಾಗಿಲು ತೆರೆದಾಗ ಲೈಟ್ ಹಾಕಿ ಮನೆಯಲ್ಲಿ ಯಾರು ಇಲ್ಲವಾ ಎಂದು ಕೇಳಿದರು. ಯಾರು ಇಲ್ಲ ಎಂದು ಹೇಳಿದಾಗ ನನ್ನ ತಂದೆಗೆ ಅವ್ಯಾಚ್ಯವಾಗಿ ಬೈದು ನನ್ನ ಕಾಲರು ಹಿಡಿದು ಎಳೆದು ನಾಲ್ವರು ಪೊಲೀಸರು ಸೇರಿ ನನಗೆ ಹಲ್ಲೆ ನಡೆಸಿದರು. ಮನೆಯ ಬಳಿ ಪೊಲೀಸ್ ವಾಹನ ಇತ್ತು. ಅಲ್ಲಿಗೆ ಕರೆದು ಕೊಂಡು ಹೋದಾಗ ನಾನೇನು ತಪ್ಪು ಮಾಡಿದ್ದೇನೆ ಎಂದು ಎಸ್.ಐ ಅವರಲ್ಲಿ ಕೇಳಿದಾಗ, ನೀನು ಗಲಾಟೆಯಲ್ಲಿ ಇಲ್ಲವಾ?, ಹಾಗಾದರೆ ಹೋಗು’ ಎಂದು ಮನೆಗೆ ಕಳಿಸಿದ್ದಾರೆ. ಆದರೆ ಪೊಲೀಸರ ಲಾಠಿ ಏಟಿನಿಂದ ನನ್ನ ಎಡ ಕೈಗೆ ಬಲವಾದ ಗಾಯವಾದ್ದರಿಂದ ನಾನು ಜಾಗರಣ ವೇದಿಕೆ ಆಂಬುಲೆನ್ಸ್‌ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ಪಂಚೋಡಿ ವೈನ್ ಶಾಪ್ ಬಳಿ ಗಲಾಟೆ ನಡೆದಿತ್ತು. ಆದರೆ ನನಗೆ ಈ ವಿಚಾರ ಗೊತ್ತಿರಲಿಲ್ಲ. ನಾನು ಮನೆಯಲ್ಲಿದ್ದೆ. ಪೊಲೀಸರು ನನ್ನನ್ನು ಅದೇ ವಿಚಾರದಲ್ಲಿ ತಪ್ಪು ಮಾಹಿತಿಯಿಂದ ನನಗೆ ಹಲ್ಲೆ ನಡೆಸಿದ್ದಾರೆ. ಆದರೆ ವಿಚಾರಣೆ ಮಾಡಬಹುದಿತ್ತು. ಅದನ್ನು ಮಾಡದೆ ಯಾವುದೇ ಮಾಹಿತಿ ಪಡೆಯದೇ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಭ್ರಮೀಷ್ ಅವರು ಆರೋಪಿಸಿದ್ದಾರೆ.

ಕತ್ತಿಯಿಂದ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಪೊಲೀಸರಿಂದ ವ್ಯಕ್ತಿಗೆ ಹಲ್ಲೆ ಘಟನೆ ಮಾಹಿತಿಯಿಲ್ಲ ಎಂದು ಪೊಲೀಸ್ ಮಾಹಿತಿ ಲಭ್ಯವಾಗಿದೆ.

News Editor

Learn More →

Leave a Reply

Your email address will not be published. Required fields are marked *