ಮಂಗಳೂರು: ಧಕ್ಕೆಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ; ಕಸಬಾ ಬೆಂಗ್ರೆಯ ಶಿಕ್ಷಕಿ ಸಾವು.

ಮಂಗಳೂರು: ನಗರದ ಧಕ್ಕೆಯಲ್ಲಿ ಶುಕ್ರವಾರ(ಆ.16) ಬೆಳಗ್ಗೆ ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ಶಿಕ್ಷಕಿ ಶಾಹಿದಾ (47) ಮೃತಪಟ್ಟಿದ್ದಾರೆ. ಅವರು ಕಸ್ಬಾದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬೆಳಗ್ಗೆ ಶಾಲೆಗೆಂದು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಸೋಮೇಶ್ವರ ಪಿಲಾರು ದಾರಂದಬಾಗಿಲಿನ ನಿವಾಸಿಯಾಗಿರುವ ಅವರು ಉಳ್ಳಾಲ ಠಾಣೆಯ ಎಎಸ್‌ಐ ಮಹಮ್ಮದ್‌ ಅವರ ಪತ್ನಿ. ಮೃತರು ಪತಿ, ಇಬ್ಬರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ.

ಕಳೆದ 8 ವರ್ಷದಿಂದ ಕಸಬಾ ಬೆಂಗರೆಯ ಎಆರ್‌ಕೆ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶಾಹಿದಾ ಶುಕ್ರವಾರ ಬೆಳಗ್ಗೆ ತನ್ನ ಮನೆಯಿಂದ ಶಾಲೆಗೆ ತೆರಳುವಾಗ ಬಂದರ್‌ನಲ್ಲಿ ಈ ಅಪಘಾತ ಸಂಭವಿಸಿತು.

ಜಮಾಅತೆ ಇಸ್ಲಾಮೀ ಹಿಂದ್‌ನ ಮಹಿಳಾ ಸಂಘಟನೆಯಲ್ಲಿದ್ದ ಇವರು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದು, ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡುವುದು, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು, ವಿದ್ಯಾರ್ಥಿವೇತನ ದೊರಕಿಸಿಕೊಡುವುದು ಇತ್ಯಾದಿಯಾಗಿ ಸಮಾಜ ಸೇವೆಯಲ್ಲಿ ನಿರತರಾಗಿದ್ದರು. ಮಂಗಳೂರು ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲೂ ಇವರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!