ಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ಶ್ರದ್ಧಾಂಜಲಿ ಸಭೆ.

ಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ಶ್ರದ್ಧಾಂಜಲಿ ಸಭೆಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ಮಂಗಳವಾರ ನಿಧನರಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ , ಮಾಜಿ ವಿದೇಶಾಂಗ ಸಚಿವ , ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ದಿವಂಗತ ಶ್ರೀ ಎಸ್ ಎಂ ಕೃಷ್ಣ ಇವರಿಗೆ ಪುತ್ತೂರು ಬಿಜೆಪಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾಧವ್ ರವರು ದಿವಂಗತರ ವಿಶೇಷ ಸಾಧನೆಯ ಕುರಿತು ಮಾತನಾಡಿ ನುಡಿನಮನ ಸಲ್ಲಿಸಿದರು. ನಂತರ ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು , ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ , ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ , ಬಿಜೆಪಿ ಸಂಘಟನಾ ಪರ್ವದ ಜಿಲ್ಲಾ ಸಹ ಚುನಾವಣಾಧಿಕಾರಿ ಸಾಜ ರಾದಕೃಷ್ಣ ಅಳ್ವ , ಮಾಜಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಸೇರಿದಂತೆ ಗ್ರಾಮಾಂತರ ಹಾಗೂ ನಗರ ಮಂಡಲಗಳ ಪದಾಧಿಕಾರಿಗಳು ಮಹಾಶಕ್ತಿಕೇಂದ್ರದ ಅಧ್ಯಕ್ಷ , ಕಾರ್ಯದರ್ಶಿಗಳು , ಶಕ್ತಿಕೇಂದ್ರ ಪ್ರಮುಖರು , ಮಹಿಳಾ ಮೋರ್ಚಾದ ಪ್ರಮುಖರು , ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *