ಬೆಳ್ತಂಗಡಿ: ವೇಣೂರು ಪಟಾಕಿ ಗೋಡೌನ್ ಸ್ಫೋಟ ಪ್ರಕರಣ- ಎಸ್ಪಿ ರಿಷ್ಯಂತ್ ಭೇಟಿ, ಪರಿಶೀಲನೆ

ಬೆಳ್ತಂಗಡಿ: ಬೆಳ್ತಂಗಡಿ ವೇಣೂರಿನ ಸಾಲಿಡ್ ಫೈರ್ ವರ್ಕ್ ಎಂಬ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿರುವ ಭಾರೀ ಸ್ಫೋಟ ನಡೆದ ಸ್ಥಳಕ್ಕೆ ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಎಸ್ಪಿ ರಿಷ್ಯಂತ್ ಮಾತನಾಡಿ, ಇಂದು ಸಂಜೆ 5.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಕೇರಳ ಮೂಲದ ವರ್ಗೀಸ್(62), ಸ್ವಾಮಿ(60) ಹಾಗೂ ಹಾಸನ ಅರಸೀಕೆರೆ ಮೂಲದ ಚೇತನ್ (24) ಮೃತಪಟ್ಟಿದ್ದಾರೆ. ಈ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು. 50 ಸೆಂಟ್ಸ್ ಸ್ಥಳದಲ್ಲಿ ಸಯ್ಯದ್ ಬಶೀರ್ ಎಂಬುವವರು ಪಟಾಕಿ ತಯಾರಿಸಲು ಪರವಾನಿಗೆ ಪಡೆದಿದ್ದರು‌.

2011-2012ರಲ್ಲಿ ಪಡೆದಿರುವ ಪರವಾನಿಗೆ 2019ರಲ್ಲಿ ನವೀಕರಣ ಆಗಿದೆ. 2024ರ ಮಾರ್ಚ್ ವರೆಗೂ ಲೈಸೆನ್ಸ್ ಸಿಂಧುತ್ವವಿದೆ. ಬೇಡಿಕೆಗೆ ತಕ್ಕಂತೆ ಪಟಾಕಿ ಇಲ್ಲಿ ಮಾಡಲಾಗುತ್ತಿತ್ತು ಅನ್ನುವ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪಟಾಕಿ ತಯಾರಿಸುವಾಗ ಯಾವ ಕಾರಣಕ್ಕೆ ಸ್ಫೋಟಗೊಂಡಿದೆ ಎಂಬ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೊಬೈಲ್ ಫೋರೆನ್ಸಿಕ್ ಟೀಮ್, ಡಿಪಾರ್ಟ್‌ಮೆಂಟ್ ಆಫ್ ಎಕ್ಸ್ಪೋಸಿವ್ಸ್ ತಂಡ ಬಂದು ಪರಿಶೀಲಿಸಲಿದೆ ಎಂದು ಎಸ್ಪಿ ರಿಷ್ಯಂತ್ ಹೇಳಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!