ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕರುಗಳಿಗೆ ಅಭಿನಂದನೆ ಕಾರ್ಯಕ್ರಮ

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಿದ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲಾ ನೂತನ ನಿರ್ದೇಶಕರುಗಳಿಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಪುತ್ತೂರು ಕಚೇರಿಯಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು.

ಕಾಂಗ್ರೆಸ್ ದುರಾಡಳಿತ , ರೈತ ವಿರೋಧಿ ನಿಲುವಿನಿಂದ ಬೇಸೆತ್ತು ಸಹಕಾರಿ ಬಂಧುಗಳು ಸಹಕಾರಿ ಕ್ಷೇತ್ರದಲ್ಲಿ ಬಿಜೆಪಿ ಯನ್ನು ಬೆಂಬಲಿಸುತ್ತಿದ್ದಾರೆ : ದಯಾನಂದ ಶೆಟ್ಟಿ ಉಜಿರೆಮಾರು

ಕೊಳ್ತಿಗೆ ಸಹಕಾರಿ ಸಂಘದಲ್ಲಿ ಈ ಹಿಂದೆ ಕಾಂಗ್ರೆಸ್ ಬೆಂಬಲಿತರು ಆಡಳಿತ ನಡೆಸುತ್ತಿದ್ದರು ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನ ದುರಾಡಳಿತ , ರೈತ ವಿರೋಧಿ ನಿಲುವುಗಳು , ಕೇವಲ ಒಂದು ವರ್ಗದ ಜನರ ತುಷ್ಟೀಕರಣದ ರಾಜನೀತಿ ಇವೆಲ್ಲವನ್ನೂ ಕೊಳ್ತಿಗೆಯ ಸಹಕಾರಿ ಬಂಧುಗಳು ಸೂಕ್ಷ್ಮವಾಗಿ ಗಮನಿಸಿ ತಮ್ಮ ಭವಿಷ್ಯದ ಬಗ್ಗೆ ಕಲ್ಪನೆಯನ್ನು ಇಟ್ಟುಕೊಂಡು ಸಹಕಾರಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎನ್ನುವ ಭರವಸೆಯಿಂದ ನಮ್ಮನ್ನು ಬೆಂಬಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಹಕಾರಿ ಬಂಧುಗಳು ನಮ್ಮ ಇರಿಸಿದ ನಂಬಿಕೆ , ವಿಶ್ವಾಸಕ್ಕೆ ಕಿಂಚಿತ್ತೂ ಚ್ಯುತಿ ಬಾರದ ರೀತಿಯಲ್ಲಿ ನಾವೆಲ್ಲರೂ ಕಾರ್ಯ ಪ್ರವೃತರಾಗಬೇಕೆಂದು ಹೇಳಿ ನೂತನ ನಿರ್ದೇಶಕರುಗಳಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು , ಸಹಕಾರಿ ಪ್ರಕೋಷ್ಠ ಅಧ್ಯಕ್ಷ ಕೃಷ್ಣ ಕುಮಾರ್ ರೈ ಗುತ್ತು , ಗ್ರಾ.ಮಂಡಲ ಉಪಾಧ್ಯಕ್ಷರಾದ ಯತೀಂದ್ರ ಕೊಚ್ಚಿ , ವಿಧ್ಯಾದರ ಜೈನ್ , ಗ್ರಾ.ಮಂಡಲ ಕಾರ್ಯದರ್ಶಿ ನಾಗವೇಣಿ , ಜಿಲ್ಲಾ ಯುವಮೋರ್ಛ ಕಾರ್ಯದರ್ಶಿ ವಿರೂಪಾಕ್ಷ ಭಟ್ , ಮನ್ ಕೀ ಬಾತ್ ಮಂಡಲ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ , ಭಾಸ್ಕರ ರೈ ಕಂಟ್ರಮಜಲು , ಕೊಳ್ತಿಗೆ ಶಕ್ತಿಕೇಂದ್ರ ಅಧ್ಯಕ್ಷ ಸತ್ಯಪ್ರಕಾಶ್ , ಬೂತ್ ಅಧ್ಯಕ್ಷ ಪುಷ್ಪರಾಜ ಶೆಟ್ಟಿ , ಹಿರಿಯರಾದ ಸುರೇಶ್ ಆಳ್ವ , ವಿಶ್ವನಾಥ ಕುಲಾಲ್ , ಮಾಧ್ಯಮ ಪ್ರಕೋಷ್ಠ ಸಂಚಾಲಕ ಮಹೇಶ್ ರೈ ಕೇರಿ , ನೂತನ ನಿರ್ದೇಶಕರುಗಳು ಉಪಸ್ಥಿತರಿದ್ದರು

News Editor

Learn More →

Leave a Reply

Your email address will not be published. Required fields are marked *