ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ – ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ.

ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ ಬೇಡಿಕ ಇಟ್ಟು, ಕೆಲವು ದಿನಗಳ ಚೌಕಾಸಿ ನಡೆದು, 5000 ರೂಪಾಯಿಗೆ ಒಪ್ಪಿ ಅದನ್ನು ಸ್ವೀಕರಿಸುವಾಗ ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ .

ಕಾರು ಮತ್ತು ಸ್ಕೂಟರ್ ಮದ್ಯೆ ನಂತೂರು ಸರ್ಕಲ್‌ನಲ್ಲಿ ಅಪಘಾತ ಆಗಿದ್ದು, ಈ ಕುರಿತು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ತಸ್ಲಿಂ ಕಾರಿನ ದಾಖಲೆಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಕಾರು ಮಾಲೀಕರಿಗೆ ತಿಳಿಸಿದ್ದರು. ಅದರಂತೆ ಕಾರು ಮತ್ತು ಕಾರಿನ ದಾಖಲೆಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

ಠಾಣೆಯ ಮತ್ತೊಬ್ಬ ಹೆಡ್ ಕಾನ್ಸ್ಟೇಬಲ್ ವಿನೋದ್ ಮೂಲಕ ತಸ್ಲೀಮ್ ಮತ್ತೆ  30,000 ಲಂಚಕ್ಕೆ ಬೇಡಿಕೆ ಇಟ್ಟು ಲೈಸನ್ಸ್ ಪಡೆದುಕೊಂಡು ಹೋಗಲು ತಿಳಿಸಿದ್ದರು.

ಜುಲೈ 9ರಂದು ಕದ್ರಿ ಟ್ರಾಪಿಕ್ ಪೊಲೀಸ್ ಠಾಣೆಗೆ ಹೋಗಿ ತಸ್ಲಿಂ  ಬಳಿ ಮಾತನಾಡಿದಾಗ ಲೈಸೆನ್ಸ್ ಬೇಕಾದರೆ 10,000 ರು. ನೀಡುವಂತೆ ತಿಳಿಸಿದ್ದಾರೆ.

ಕಾರ್ ಮಾಲೀಕರು ಈ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದರು.

ಈ ಕುರಿತು ಪೊಲೀಸರಾದ ತಸ್ಲೀಮ್ ಮತ್ತು ವಿನೋದ್ ವಿರುದ್ಧ ಪ್ರಕರಣ ದಾಖಲಾಗಿದೆ.

ಜುಲೈ 10 ರಂದು ಪೊಲೀಸ್  ತಸ್ಲೀಮ್ 5000 ರೂಪಾಯಿ ಲಂಚ ಸ್ಪೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಡಿ ವೈ ಎಸ್ ಪಿ. ಗಾನ ಪಿ ಕುಮಾರ್,  ಸುರೇಶ್ ಕುಮಾರ್.ಪಿ, ಪೊಲೀಸ್ ಇನ್ಸ್ಪೆಕ್ಟರ್  ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್. ಕಾರ್ಯಾಚರಣೆ ನಡೆಸಿದ್ದರು

News Editor

Learn More →

Leave a Reply

Your email address will not be published. Required fields are marked *