
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರುಗಳಿಗೆ ತಲಾ ರೂ.10 ಸಾವಿರದಂತೆ ರೂ.2.20 ಲಕ್ಷ ರೈತ ಕಲ್ಯಾಣ ನಿಧಿಯನ್ನು ಇತ್ತೀಚಿಗೆ ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ವಿತರಿಸಲಾಯಿತು .
ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ಮುಖ್ಯಅತಿಥಿಯಾಗಿ ಭಾಗವಹಿಸಿ ರೈತ ಕಲ್ಯಾಣ ನಿಧಿಯನ್ನು ಫಲಾನುಭವಿಗಳಿಗೆ ವಿತರಿಸಿದರು .


