ಮಾದನಗೇರಿಯ ಮಹಾಲೆ ಮನೆಯಲ್ಲಿ ಚೌತಿಯಂದು ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ ವಿಸರ್ಜನೆ

500 ವರ್ಷಗಳ ಭವ್ಯ ಇತಿಹಾಸವಿರುವ ಮಾದನಗೇರಿಯ ಮಹಾಲೆ ಮನೆಯಲ್ಲಿ ಚೌತಿಯಂದು ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ ವಿಸರ್ಜಜನೆ ಶನಿವಾರ ಸಂಜೆ ಅದ್ದೂರಿಯಾಗಿ ನಡೆಯಿತು.

ಡಿ.ಜೆ. ಅಬ್ಬರವಿಲ್ಲದೆ ಸಾಂಪ್ರದಾಯಿಕ ಪದ್ದತಿಯಲ್ಲಿ ವಾದ್ಯಘೋಷ, ಚಂಡೆನಾದ ಗೊಂಬೆ ವೇಷಧಾರಿಗಳು, ಹಲವು ಅಣಕು ದೃಶ್ಯಾವಳಿಗಳು, ಜನರ ನೃತ್ಯದೊಂದಿಗೆ ಸಾಗಿದ ಮೆರವಣಿಗೆ ಮಹಾಲೆ ಮನೆಯಿಂದ ಮೂಲಕೇರಿಯವರೆಗೆ ಅಂದರೆ 2 ಕಿ.ಮೀ.ಗೂ ಹೆಚ್ಚು ದಾರ ಬಹು ಆಕರ್ಷವಾಗಿ ಸಾಗಿತು. ವಿಶೇಷ ಅಲಂಕಾರದೊಂದಿಗೆ ವಾಹನದಲ್ಲಿ ಕುಳಿತ ಗಣೇಶ ಎಲ್ಲರ ಗಮನ ಸೆಳೆಯಿತು. ಮುಂದಿನ ವರ್ಷ ಮತ್ತೆ ಬಂದು ಹರಸು ಎಂದು ಜನರು ವಿನಾಯಕನಲ್ಲಿ ಪ್ರಾರ್ಥಿಸಿ ಬೀಳ್ಕೊಟ್ಟರು. ಮಹಾಲೆ ಕುಟುಂಬದವರು ಹಾಗೂ ಅಪಾರ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.

ಮಹಾಲೆ ಮನೆತನದವರು ತಲತಲಾಂತರದಿಂದ ಗಣಪತಿ ಮೂರ್ತಿ ತಯಾರಿಸುವುದರ ಜೊತೆ ಮನೆಯಲ್ಲಿ ಪ್ರತಿಷ್ಠಾಪಿಸಿ ಆರಾಧಿಸುತ್ತಾ ಬಂದಿದ್ದು, ಮನೆಯಲ್ಲಿನ ಗಣೇಶನಾದರೂ ರಾಜ್ಯದ ವಿವಿದೆಡೆ ಹಾಗೂ ಹೊರ ರಾಜ್ಯದಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಾರೆ ಅಲ್ಲದೆ 15 ದಿನಗಳ ಕಾಲ ಆರಾಧನೆ ನಡೆಯುವುದು ಮತ್ತೊಂದು ವಿಶೇಷವಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.